ಭಾನುವಾರ

ಬಲ್ಲೀರೇನಯ್ಯಾ ಸಂಬಂಧಗಳ ಮೂಲವ?

ಅಕ್ಕಾ,ಒಂದು ಮೊಳ ಮಲ್ಲಿಗೆ ಕೊಡಲಾ? ಅಂದಳು ಅವಳು,ಹೂ ಮಾರುವವಳು.'ಅಕ್ಕಾ' ಎಂದು ಕರೆಯುವದರ
 ಮೂಲಕ, ಆಕೆಯ ಅರಿವಿಗೆ ಬರದ, ನನ್ನ ಪರಿಧಿಗೂ  ಬರದ ಸಂಬಂಧದ ಎಳೆಯೊಂದನ್ನು  ಕಟ್ಟಿಬಿಟ್ಟಿದ್ದಳು.ನಾನು ಮೊಳ ಮಲ್ಲಿಗೆ ಕೊಂಡೆನೋ, ಬಿಟ್ಟೆನೋ ಅದು ಈ  ಲೇಖನದ ವ್ಯಾಪ್ತಿಗೆ ಹೊರತಾಗಿದ್ದು.


ಸಂಬಂಧಗಳೆ ಹಾಗೆ! ಕ್ಷಣದಲ್ಲಿ ಹುಟ್ಟಿಬಿಡುತ್ತವೆ,ಪೋಷಿಸಿದಲ್ಲಿ ಬೆಳೆಯುತ್ತವೆ,ತೀರಾ ಸೂಕ್ಷ್ಮವಾಗಿ ಗುರ್ತಿಸುತ್ತಾ, ಅವರವರ ಮನೋಗುನಕ್ಕನುಗುಣವಾಗಿ ಸ್ಪಂದಿಸುತ್ತಾ ಇದ್ದರೆ ಅಂತಹ ಸಂಬಂಧಗಳು ಬತ್ತದ ಅನುಭಾವದ ಪಯೋನಿಧಿಯೇ ಸರಿ.ನಡುವೆ ತೇಪೆ ಹಾಕುವದು,ಕತ್ತರಿಸುವದು,ಇತ್ಯಾದಿ ಎಲ್ಲ ತರಹದ ನಿಯಂತ್ರಣಗಳು ನಮ್ಮ ಕೈಯಲ್ಲಿರ ಬೇಕಾದುದು ಅಗತ್ಯ,ಅದು ಬೇರೆ ವಿಷಯ.

ಪಕ್ಕದ ಮನೆಯ ಪುಟ್ಟ ಕೂಸು'ರಕ್ಷಾ'  ನಮ್ಮ ಮನೆಗೆ ದೋಸೆ ತಿನ್ನಲು ಪ್ರತಿದಿನ ಬರುತ್ತಿದ್ದಳು,ಬೆಳಿಗ್ಗೆ ದೇವರಪೂಜೆಯ ಗಂಟೆಯ ಶಬ್ಧ ಆಕೆಗೆ ಕೇಳಿದ ಕೂಡಲೇ  ಆಕೆಯ ಅಮ್ಮನ ಸೀರೆ ಎಳೆದು ನಮ್ಮ ಮನೆಯ ದಿಕ್ಕಿನತ್ತ ಕೈ ತೋರಿಸುತ್ತಿದ್ದಳಂತೆ,ಅವಳ ಅಮ್ಮ ನಮ್ಮ ಮನೆಗೆ ಕಳಿಸಿಬಿಟ್ಟರೆ ಆಯಿತು,ಅಂಬೆಗಾಲಿಕ್ಕುತ್ತಾ, ದೋಚೆ ಮಮ್ ಮಮ್ ಎಂದು ಪುಟ್ಟ ಬಾಯಿಯಲ್ಲಿ  ಆಕೆ ನಗುತ್ತಿದ್ದರೆ ನನ್ನ ಅಮ್ಮನಿಗೂ ದೋಸೆ ಮಾಡಲು ಉತ್ಸಾಹ.ಬೆಲ್ಲ ತುಪ್ಪದಲ್ಲಿ ಅದ್ದಿದ ದೋಸೆ ಯನ್ನು ತಿಂದು, ನಮ್ಮೊಟ್ಟಿಗೆ ಸ್ವಲ್ಪ ಆಟವಾಡಿ,ಸವಾರಿ ಮನೆಯತ್ತ  ತಿರುಗಿಬಿಡುತ್ತಿತ್ತು..ಆಕೆ ಬರದೇ ಇದ್ದರೆ ನಮಗೆಲ್ಲ ಒಂದು ತರಹದ  ಕಸಿವಿಸಿ,ಅಮ್ಮನಂತೂ,ಕೂಸು ಬೈಂದೆ ಇಲ್ಯಪ,ನೀನಾದ್ರೂ ಹೋಗಿ ದೋಸೆ ಕೊಟ್ಟಿಕ್ಕೆ ಬಾ' ಎಂದು ನನ್ನನ್ನು ಆಕೆಯ ಮನೆಗೆ ಕಳಿಸುತ್ತಿದ್ದರು.ಈ ಪುಟ್ಟ ಕೂಸು ನಮಗಾವ ಬಂಧುವು ಅಲ್ಲ.ಆಕೆಯ ಬೊಚ್ಚುಬಾಯ ನಗೆ,ತುಂಟಾಟಗಳಿಂದ ನಮ್ಮ ಜೊತೆಗೊಂದು ಬಂಧ ಗಟ್ಟಿಗೊಳಿಸಿದ್ದಳು.
ಹಾಮ್..ಹೀಗೆ ಹುಟ್ಟಿಬಿಡುತ್ತದೆ ಸಂಬಂಧದ ಎಳೆಯೊಂದು!
ಮಾನವ ಸಮಾಜಮುಖಿ,ಬಂಧ,ಬಂಧನ ಮನುಷ್ಯನ ಮೂಲಭೂತ ತುಡಿತ;
ದಿನವೂ ಅದೇ ಬಸ್ಸಿನಲ್ಲಿ ಆಕೆ ಸಿಕ್ಕಾಗ,ನಮ್ಮ್ ಕಣ್ಣುಗಳು ಆಕೆಯನ್ನ ಗುರುತಿಸಿಬಿಡುತ್ತವೆ,ಒಂದು ಚಿಕ್ಕ ನಗೆ ನಗದೇ ಮುಂದೆ ಹೋಗಲು ಬಿಡಡು ಈ ಮನ,ಹಾನ್,ಸಂಶೋಧನೆಯೊಂದರ ಪ್ರಕಾರ ಅಪರಿಚಿತ ಪರಿಚಿತ ನಗೆ ನಗಲು ಅಂದರೆ,ಅದೇ ಬಸ್ಸಿನಲ್ಲಿ ದಿನವೂ ಸಿಗುವ ಆಕೆಯತ್ತ ಪರಿಚಯದ ನಗೆ ಬೀರಲು ೪-೫ ದಿನಗಳು ಸಾಕಂತೆ.(ಮಾತಾಡಲು, ಸುದ್ದಿ ಹೇಳಲು ಎಷ್ಟು ದಿನಗಳು
ಬೇಕು ಅದೆಲ್ಲ ನನಗೆ ಗೊತ್ತಿಲ್ಲಾಪ್ಪ..)


ಇನ್ನೊಂದು ವರ್ಗವಿದೆ, ಅದು ಮಿಸ್ಡ್ ಕಾಲ್ ಸಂಬಂಧಗಳು.
ಆಕೆಯನ್ನ ದಿನವೂ ಗಮನಿಸುತ್ತಿದ್ದೆ,ಫೋನಿನಲ್ಲಿ ತಾಸುಗಟ್ಟಲೇ ಹರಟುತ್ತಿದ್ದಳು ,Bio Data ಗಳ ವಿನಿಮಯ ನಡೆಯುತ್ತಿತ್ತು, ಒಂದು ಸಾರೇ ಆಗಿದ್ದರೆ ಓಕೇ , ಆಕೆಗೆ ಹತ್ತೋ ಹನ್ನೊಂದು ಮಿಸ್ಡ್ ಕಾಲ್ ಸ್ನೇಹಿತರುಗಳಿದ್ದರು. ಇಂತಹವರನ್ನೆಲ್ಲ ಹೇಗೆ ನಂಬಿಕೊಳ್ತಾರೋ ಜನರು,ಸುಮ್ಮನೇ ಟೈಮ್ ಪಾಸ್ ಮಾಡುವ ಮಾರ್ಗವಿರಬೇಕು ಅಂದು ಕೊಂಡಿದ್ದೆ.ಆಕೆಯ ಮನೆಯ ವಾತಾವರಣ ಸರಿ ಇಲ್ಲದಿದ್ದು ದು ಇನ್ನೊಂದು ಕಾರಣ ಅನ್ನಿಸಿತ್ತು ನನಗೆ.ಇನ್ನೊಮ್ಮೆ ಬರೆಯೋಣ ಇದರ ಬಗ್ಗೆ.

ನನ್ನ ಹಲವು ಸ್ನೇಹಿತರಿದ್ದಾರೆ, ನಮ್ಮ ಮನೆಗಳ ಸುದ್ದಿ ಹಂಚಿಕೊಳ್ಳುತ್ತೇವೆ, ಸಮಸ್ಯೆಗಳು ಬಂದಾಗ ಸಲಹೆ ಪಡೆಯುತ್ತೇವೆ, ನೋಡೇ ಇವತ್ತು  ಒಂದು ಕೂಸನ್ನು ನೋಡಲೇ ಹೋಗಿದ್ದೆ, ಎಂದು  ಸ್ನೇಹಿತನೊಬ್ಬ ಆಕೆಯ ಫೋಟೋ ವನ್ನು ಮೈಲ್ ಮಾಡುತ್ತಾನೆ,ಮದುವೆಗೆ ಎರಡು ದಿನ ಮುಂಚೇನೆ ಬರೋ ಎಂದು ಆಕೆ ಒತ್ತಾಯಿಸುತ್ತಾಳೆ, ಇವರಾರು ರಕ್ತ ಸಂಬಂಧಿಗಳಲ್ಲ, ಆದರೂ ಬಂಧುಗಳು  ಅದೇ ಗಾದೆಯಿದೆಯಲ್ಲ, 'ಸಮಯಕ್ಕಾದವರೇ ಬಂಧುಗಳು' ಅನ್ನಿಸಿಬಿಡುತ್ತದೆ.

ಒಂದುತರ ರಾಬಿನ್‌ಸನ್ ಮತ್ತು ಕ್ರಸೋ ಕತೆಯನ್ನ ಹೋಲುತ್ತದೆ ನಮ್ಮ ಈ ಬದುಕು. ಪರಿಚಯವಿಲ್ಲ, ನಾನು ಕರ್ನಾಟಕದವಳು, ನಾನು ಬಿಹಾರಿ, ನಾನು ಭಾರತೀಯ,ನೀನು ಪರಂಗಿಯವ  ಅನ್ನುವ ಮಾತೇ ಇಲ್ಲ, ಯಾಕೆ ಗೊತ್ತಾ ಮಾತನಾಡಲು ಮಾತೇ ತಿಳಿದಿಲ್ಲ. ಹೀಗಿದ್ದಾಗಲು, ಹೇಳಬೇಕೆನಿಸಿದ್ದನ್ನ ಹೇಳುತ್ತ, ಕೇಳಿಸಿಕೊಳ್ಳುತ್ತ, ನಮ್ಮದೇ ಲೋಕ ಕಟ್ಟುತ್ತಾ, ಪರಿಚಯದ ಬಂಧಗಳಿಸುತ್ತಾ ಜೀವನದಲ್ಲಿ ಮುನ್ನಡೆಯುತ್ತೇವಲ್ಲ ಇಂತಹ ಸಂಬಂಧಗಳಿಗೆ  ಎಣೆಯುಂಟೆ?ಬೆಲೆಕಟ್ಟಲಾದೀತೇ?
ಇಂತಹ ಸಂಬಂಧಗಳ ಮೂಲ ಹುಡುಕುವದು ವ್ಯರ್ಥ ಪ್ರಯತ್ನವೇ ಸರಿ,ಅಲ್ಲವ?

9 ಕಾಮೆಂಟ್‌ಗಳು:

ಮನದಾಳದಿಂದ............ ಹೇಳಿದರು...

ಹೌದು,
ಕೆಲವು ಸಂಭಂದಗಳೇ ಹಾಗೆ. ಅರಿಯದೆ ಶುರುವಾಗಿ, ಬೆಳೆಯುವ ಬಂಧನ.
ಚಂದದ ಬರಹ.......

ಮನಸಿನಮನೆಯವನು ಹೇಳಿದರು...

ಹೌದೌದು ಸಂಬಂಧಗಳೇ ಹೀಗೆ..
೨೦೧೧ರಲ್ಲಿ ಸಿಹಿಕ್ಷಣಗಳು ಎದುರಾಗಲಿ...

ಮನಸಿನಮನೆಯವನು ಹೇಳಿದರು...

ಹೌದೌದು ಸಂಬಂಧಗಳೇ ಹೀಗೆ..
೨೦೧೧ರಲ್ಲಿ ಸಿಹಿಕ್ಷಣಗಳು ಎದುರಾಗಲಿ...

ಮನಸಿನಮನೆಯವನು ಹೇಳಿದರು...

ಹೌದೌದು ಸಂಬಂಧಗಳೇ ಹೀಗೆ..
೨೦೧೧ರಲ್ಲಿ ಸಿಹಿಕ್ಷಣಗಳು ಎದುರಾಗಲಿ...

ವಾಣಿಶ್ರೀ ಭಟ್ ಹೇಳಿದರು...

houdu kelavu sambandhagala jaaadnnu huduka baradu.. kelavobbaralli ariyade naavu atmeeyateyannu kandu bidutteve... olleya baraha :)

nanna blogigomme banni

Shweta ಹೇಳಿದರು...

@Praveen,
Tumba dhanyavadaglu.Nimma lekhana galanna oduttiruttene,kushi aguttade odalikke...

@Kattale mane

'Guru dese' hogi 'Mane kattale' yaake aadaddu?

@Vanishri

Vanishri nannurina hattiradavaru neevu!

Nimma blogannu oduttiddene,infact nanage yaako comment madalikke agutttilla illinda(blocked)

tumba ishta aayitu nimma lekhanagalella...

-Shweta

balasubramanya ಹೇಳಿದರು...

@ ಶ್ವೇತಾ , ನಿಮ್ಮ ಈ ಲೇಖನ ನೈಜ ವಾಗಿದೆ .ಇಷ್ಟವಾಯಿತು , ನೀವು ನನ್ನ ಬ್ಲಾಗಿಗೆ ಬಂದಿದ್ದಕ್ಕೆ ಥ್ಯಾಂಕ್ಸ್.ನಿಮ್ಮ ಭೇಟಿ ಮುಂದುವರೆಸಿ.

ಜಲನಯನ ಹೇಳಿದರು...

ಶ್ವೇತಾ..
ಸಮ್-ಬಂಧ (some -ಬಂಧ)ಸಂಬಂಧವೆಂದರೆ ಒಂದು ಬಂಧ..ಭವದಲ್ಲಿ ಬಂಧನ. ನಿಮ್ಮ ಲೇಖನದಲ್ಲಿ ವಾಸ್ತವತೆ ಎದ್ದು ಕಾಣುತ್ತೆ...ಚನ್ನಾಗಿದೆ

ದಿನಕರ ಮೊಗೇರ ಹೇಳಿದರು...

houdu... kelavu sambhandakke hesarirolla....

tumbaa chennaagide baraha....

ಯಾಕ ಮಾಡುತಿ ಲೋಕದ ಚಿಂತಿ?

 ಕರೊನ ಇಡಿ ಜಗತ್ತಿನ ವ್ಯವಸ್ತೆಯನ್ನ ಬುಡಮೇಲು ಮಾಡಿಯಾದ ಮೇಲೆ ಮತ್ತೆ ಮತ್ತೆ ನಮ್ಮ ಶಕ್ತಿ ಸಾಮರ್ಥ್ಯಗಳ ಬಗ್ಗೆ ಬಡಾಯಿ ಕೊಚ್ಚುವದರಲ್ಲಿ ಯಾವುದೇ ಅರ್ಥವಿಲ್ಲ.ಅಲ್ಲವ? ನೂರಕ...