ಬುಧವಾರ

ಕುಳಿತಿದ್ದೇನೆ ಬಾರದವರಿಗಾಗಿ ಕಾಯುತ್ತ , ಕಾಡುವ,ಬಿಡದ ನೆನಪುಗಳನ್ನು ಹತ್ತಿಕ್ಕುತ್ತ


ಸುರಿವ ಮಳೆ  ಸುರಿದು ಬರಿದಾಗಿತ್ತು,ನನ್ನ ಕಣ್ಣೀರಿನಂತೆಯೇ.ಯಾಕೊ ಅತ್ತು ಹಗುರಾಗೋಣವೆಂದರೆ ಅಳುವು ಬರುತ್ತಿಲ್ಲಾ.ಮಾಡಂಚಿನಿಂದ ಮಳೆ ನೀರು ಬಿದ್ದು ಬಿದ್ದು ನೆಲ ಸವೆದಿತ್ತು,ಕೊರಕಲಾಗಿತ್ತು,ನನ್ನ ಬದುಕಿನಂತೆಯೆ.ಬಿದ್ದ ನೀರು ಆ ಇಳೆಯ ಒಡಲೊಳಕ್ಕೆ ಇಳಿಯಲೇ ಇಲ್ಲ ಆತನ ಪ್ರೀತಿಯಂತೆ.ಕೊರಕಲ ಸಂದಿಯನ್ನೂ ಬಿಡದೇ ಅಂಗಳದ ಮಣ್ಣ ಸಮೇತ ಹಾಗೆಯೇ ಕೊರೆದು, ತರೆದು ಮಳೆಯ ನೀರು ಕೆಂಪಾಗಿ ದೂರ ಹರಿದಿತ್ತು ನಮ್ಮ ಪ್ರೀತಿಯಂತೆಯೆ.ಮಣ್ಣ ಸಾರವೆಲ್ಲ ಮಳೆಯ ನೀರಿನೊಟ್ಟಿಗೆ ಹರಿದು ದೂರ ದೂರ ಸರಿದು ಸಾಗರವ ಸೇರಿತ್ತು ಉಪ್ಪಾಗಲು,ಮರಳಾಗಲು,ಥೇಟ್ ನನ್ನ ಕಣ್ಣಿರಿಂತೆಯೇ, ನನ್ನ ಬದುಕಿನಂತೆಯೇ.

ಅಂವ ಕಂಡಿದ್ದು ನಮ್ಮ ಮಲೆನಾಡಿನ ಆ ರಪ್ಪನೆ ಬಾರಿಸುವ ಮಳೆಗಾಲದಲ್ಲಿಯೇ.ನಾನು ಆಗ ಧಾರವಾಡದಲ್ಲಿ ಎಮ್ ಎ ಓದುತ್ತಿದ್ದೆ.ಇಂಗ್ಲಿಷ್ ನನ್ನ ಮೆಚ್ಚಿನ ವಿಷಯ. ಅವಗೆ ಹೇಗೋ ತಿಳಿದಿತ್ತು ಅನ್ನಿಸುತ್ತದೆ.ಆತ ಮಾತ ಶುರುವಲ್ಲಿಯೇ,
I'm Nobody! Who are you?
Are you – Nobody – too?

Then there's a pair of us?

Don't tell! they'd advertise – you know!
How dreary – to be – Somebody!

How public – like a Frog –

To tell one's name – the livelong June –

To an admiring Bog!



ಅಂದಿದ್ದ. ಎಮಿಲಿ ಡಿಕಿನ್ಸೊನ್ ರ ಪದ್ಯ.

ಇಲ್ಲಿ ಯಾರು ಯಾರಿಗು ಒತ್ತಾಯಿಸುವ ಅಗತ್ಯವಿಲ್ಲ, ಯಾರೋ ಅಗುವದಕ್ಕೆ ಹೋಗಿ ಎನೇನೊ ಆಗುವ ಅನಿವಾರ್ಯತೆ ಇಲ್ಲ,ನೀನು ನೀನಾಗಿರಲಿಕ್ಕೆ,ನಿನಗನಿಸಿದ್ದನ್ನ ಹೇಳಲಿಕ್ಕೆ ಯಾರ ಭಯವು ಇಲ್ಲ ಅಂದ.

ಕುಶಿ ಅನ್ನಿಸಿತು,ಮಹಿಳೆಯರ ಮೆಲೆ ಗೌರವವಿರುವವರನ್ನ ಕಂಡರೆ ನನಗೆ ಗೌರವ ಜಾಸ್ತಿ. ಹೀಗೆ ಪರಿಚಯ ೪ನೆ ವರುಷಕ್ಕೆ ಬಂದಿತ್ತು.ಮನೆಯಲ್ಲಿ ಮದುವೆಯ ಮಾತುಕತೆ ನಡೆದಿತ್ತು.ಜಾತಿ,ಆಚಾರ,ಗ್ರಹ ಗತಿಗಳೆಲ್ಲ ಪ್ರತಿಕೂಲವಾಗಿದ್ದವು.ಮನೆಯಲ್ಲಿ ಧಾರವಡದ ಬಿಸಿಲಲ್ಲಿ ಕಂಡ ಅವನ್ನ ಅಳಿಯನನ್ನಾಗಿ ಮಾಡಿಕೊಳ್ಳಲು ಕೊನೆಗು ಒಪ್ಪಲೆ ಇಲ್ಲ, ಆ ಮಳೆಗಾಲದಲ್ಲೂ.

ಅಂದು ನಮ್ಮನೆಯ ಕೆರೆ ದಂಡೆಯ ಮಗ್ಗುಲಲ್ಲಿ ಕೊನೆಯ ನಿರ್ಧಾರ.ಅದೆ ಸಿನಿಮೀಯ ತಿರುವುಗಳಿಗಾಗುವ ಅಂತ್ಯ ನಮ್ಮ ಜೀವನದ್ದು. ಬೇಜಾರಿನದ್ದು.
I cannot live with you,

It would be life,

And life is over there

Behind the shelf

………….



So we must keep apart,

You there, I here,

With just the door ajar

That oceans are,

And prayer,

And that pale sustenance,

Despair! -

Emily Dickinson

ಆ ಸಾಲುಗಳನ್ನ ಹೇಳಿಯೇ ಆತ ದೂರಸರಿದಿದ್ದು.

ಹ್ಮ್ಮ್ ಅಂದೇ ಮಳೆಗಾಲ ಶುರುವಾಗಿತ್ತು,ಜಡಿಮಳೆ. ಕನಸಾಗಿರಲಿ ಎಂದು ಕೈ ಚಿವುಟಿ ನೋಡಿಕೊಂಡಿದ್ದೆ.ಉರಿಯಲಿಲ್ಲ,ಉರಿಯಲಿಕ್ಕೆ ನೋವು ಗೊತ್ತಾಗುವದಾದರೂ ಹೇಗೆ? ಆ ನೋವೇ ಈ ನೋವ ನುಂಗಿದರೆ?
ಮತ್ತೆ ಅದೇ ಮಳೆಗಾಲ, ಅದೇ ಕಿಡಕಿಯ ಪಕ್ಕ ಅಂತೆಯೇ ಕುಳಿತಿದ್ದೇನೆ ಬಾರದವರಿಗಾಗಿ ಕಾಯುತ್ತ , ಕಾಡುವ,ಬಿಡದ ನೆನಪುಗಳನ್ನು ಹತ್ತಿಕ್ಕುತ್ತ.
ಉಸಿರು ಎಲ್ಲೋ ಕಳೆದು ಹೋಗಿದೆ,ಕಾಣದ ಅವನಂತೆ ಕಣ್ತುಂಬ ನಿದ್ರೆ ಬರದೆ ವರುಷಗಳಾಗಿದೆ,ಅಂದಿನ ದಿಟ್ಟತನ ಅವನೊಟ್ಟಿಗೇ ಮರೆಯಾಗಿದೆ ಮತ್ತೆ ಬಾರದಂತೆ.ಮತ್ತೆ ಮಳೆ ಶುರುವಾಗಿದೆ ಒಂದೇ ಸಮನೆ ಕಾಡುವ ನೆನಪುಗಳಂತೆ.

ಯಾಕ ಮಾಡುತಿ ಲೋಕದ ಚಿಂತಿ?

 ಕರೊನ ಇಡಿ ಜಗತ್ತಿನ ವ್ಯವಸ್ತೆಯನ್ನ ಬುಡಮೇಲು ಮಾಡಿಯಾದ ಮೇಲೆ ಮತ್ತೆ ಮತ್ತೆ ನಮ್ಮ ಶಕ್ತಿ ಸಾಮರ್ಥ್ಯಗಳ ಬಗ್ಗೆ ಬಡಾಯಿ ಕೊಚ್ಚುವದರಲ್ಲಿ ಯಾವುದೇ ಅರ್ಥವಿಲ್ಲ.ಅಲ್ಲವ? ನೂರಕ...