ಡಿಸೆಂಬರಿನ ಚಳಿ ಜೋರಾಗುತ್ತಿರುವಂತೆಯೇ,ಕ್ರಿಸ್ ಮಸ್ ನ ಸಂಭ್ರಮ, ಹೊಸವರುಷದ ಆಗಮನದ ದಿನಗಣನೆ ಶುರುವಾಗಿದೆ. ಯಾವತ್ತಿನಂತೆ,ನಿಟ್ಟುಸಿರು ಬಿಡುತ್ತಾ,'ಅಯ್ಯೊ ಅದೆಷ್ಟು ಬೇಗ ಈ ವರ್ಷ ಕಳೀತಪ್ಪ' ಅಂತ ಹೇಳಲು ಶುರುಮಾಡಿದ್ದಾಗಿದೆ.
ಹರಸಾಹಸ ಪಟ್ಟ ಒಸಾಮ ಮೇಲಣ ಧಾಳಿ, ಅಲ್ಲೊಂದು ಭೂಕಂಪ,ಇಲ್ಲೊಂದು ಪ್ರವಾಹ,
ಮುಂಬೈ ನ ಜನರ ಧೈರ್ಯ,ಬದುಕನ್ನ ಪ್ರೀತಿಸುವ ಕಲೆ,ಉಗ್ರರ ಕ್ರೌರ್ಯ,ಅಣ್ಣಾ ಹಜಾರೆ, ಅಮಿತಾಬ್ ಬಚ್ಚನ್ ರ ಮೊಮ್ಮಗಳು,ವಿದ್ಯಾ ಬಾಲನ್,ಸುದ್ದಿ ಮಾಡದೆ ಭೇಶ್ ಅನ್ನಿಸಿಕೊಂಡ ಕಿರಣ್ ಮತ್ತು ಅಮಿರ್ ಖಾನ್,ಖಾಲಿ ಡಬ್ಬಾ ಸೇರಿ ಹಿಟ್ಟಾದ ಶಾರುಕ್ ನ 'ರಾ ಒನ್', ಹೇಳದೇ,ಕೇಳದೆ ಸುದ್ದಿ ಮಾಡಿದ 'ಕೊಲಾವೇರಿ ಡಿ',
ಕೊಳೆತು ನಾರುತ್ತಿರುವ ಕರ್ನಾಟಕದ ರಾಜಕಾರಣ, ವಿಪರೀತಕಕ್ಕೇರುತ್ತಿರುವ ಮಾನಹಾನಿ,ಪ್ರಾಣಹಾನಿ ಪ್ರಕರಣಗಳು,
- ಇವೆಲ್ಲಾ ಈ ವರ್ಷದ ಕೆಲವು ಹೈ ಲೈಟ್ಸ್ ಅಷ್ಟೇ.
ಇವೆಲ್ಲವುಗಳ ಮಧ್ಯೆ, ಬೆಳಿಗ್ಗೆದ್ದು ಪೇಪರ್ ಓದಲಿಕ್ಕೆ ಮನಸ್ಸಾಗುವದಿಲ್ಲ.ಮಾನಹಾನಿ,ಪ್ರಾಣಹಾನಿ ಪ್ರಕರಣಗಳ ಸಂಖ್ಯೆ ಯಲ್ಲಾಗುತ್ತಿರುವ ಏರಿಕೆ ನನಗೆ ನಿಜಕ್ಕು ಅಸಹ್ಯ ಅನಿಸುತ್ತಿದೆ.ಮನುಷ್ಯ ಇನ್ನೊಬ್ಬ ಮನುಷ್ಯನನ್ನ ವಸ್ತುವಾಗಿ ಪರಿಗಣಿಸುತ್ತಿರುವದು ಖೇದಕಾರಿಯಾಗಿದೆ.
ಧಿಕ್ಕಾರವಿರಲಿ ಕ್ರೌರ್ಯಕ್ಕೆ.ಮಾನವನ ವಿಕೃತ ಮುಖಕ್ಕೆ ತೆರೆ ಬೀಳಲಿ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ